ಮಂಗಳೂರು: ಆ.30ರಿಂದ 2ನೇ ಆವೃತ್ತಿಯ ಕಬಡ್ಡಿ ಪ್ರೀಮಿಯರ್ ಲೀಗ್

Update: 2024-08-27 16:30 GMT

ಮಂಗಳೂರು, ಆ.27: ಶೆಫ್ ಟಾಕ್ ಸೀಸನ್ -2 ಕಬಡ್ಡಿ ಪ್ರೀಮಿಯರ್ ಲೀಗ್ ಆ.30ರಿಂದ ಸೆ.1ರವರೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಆಯೋಜಕ ಸುದೇಶ್ ಭಂಡಾರಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದ ಪ್ರಯುಕ್ತ ಆ.30ರಂದು ನಡೆಯುವ ಆಹಾರೋತ್ಸವವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮತ್ತು ಆ.31ರಂದು ನಡೆಯುವ ಕಬಡ್ಡಿ ಪಂದ್ಯಾಟವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದಾರೆ.

ಕಳೆದ ವರ್ಷ ಸೀಸನ್ 1 ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಬಾರಿ ಗೌರವಾಧ್ಯಕ್ಷ ಪ್ರಕಾಶ್ ಕುಂಪಲ ಮಾರ್ಗದರ್ಶನ ದಲ್ಲಿ ಕಬಡ್ಡಿ ಟೂರ್ನ್‌ಮೆಂಟ್ ಜೊತೆಗೆ ಆಹಾರೋತ್ಸವ ಮತ್ತು ವಿನೋದ ಮೇಳವನ್ನು ಆಯೋಜಿಸಿದ್ದೇವೆ. ಈ ಸಂದರ್ಭ ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ರನ್ನು ಸನ್ಮಾನಿಸಲಾಗುವುದು. ಅತಿಥಿಗಳಾಗಿ ಡಾ. ಸದಾನಂದ ಶೆಟ್ಟಿ, ಕನ್ಯಾನ ಸದಾಶಿವ ಶೆಟ್ಟಿ, ಸದಾಶಿವ ಉಳ್ಳಾಲ ಪಾಲ್ಗೊಳ್ಳಲಿದ್ದಾರೆ. ಶೆಫ್ ಟಾಕ್ ಫುಡ್ ಹಾಸ್ಪಿಟಾಲಿಟಿ ಸರ್ವಿಸಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಗೋವಿಂದ ಬಿ. ಪೂಜಾರಿ ಬಹುಮಾನ ವಿತರಿಸಲಿದ್ದಾರೆ ಎಂದರು.

ವಿಆರ್ ಯುನೈಟೆಡ್ ಅಧ್ಯಕ್ಷ ಅಝ್ಫರ್ ರಝಾಕ್ ಮಾತನಾಡಿ ಟೂರ್ನಮೆಂಟ್‌ನಲ್ಲಿ ಅಸ್ರಾ ಬ್ರಿಗೇಡ್ಸ್, ಲೈಫ್ ಲೈನ್ಸ್ ಫಾಲ್ಕನ್ಸ್, ಟೀಮ್ ಬಾವ, ಯು ಕುಂಜತ್ತೂರು, ಮಂಗಳೂರು ಯುನೈಟೆಡ್ ಕಬಡ್ಡಿ ಕ್ಲಬ್, ಪ್ರಕಾಶ್ ಕುಂಪಲ ವಾರಿಯರ್ಸ್, ಕರ್ನಾಟಕ ತುಳುವಾಸ್ ನೈಜೀರಿಯಾ, ನ್ಯೂಸ್ಟಾರ್ ಮಂಗಳೂರು ಸಹಿತ 8 ತಂಡಗಳು ಭಾಗವಹಿಸುತ್ತಿವೆ. 99 ಆಟಗಾರರು ಆಯ್ಕೆಯಾಗಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಬಿಎ ಮೊಯ್ದಿನ್‌ ಬಾವ, ಗೌರವ ಸಲಹೆಗಾರ ವಿಶ್ವಾಸ್ ದಾಸ್, ಹರೀಶ್ ನಾಯಕ್, ಕರುಣಾಕರ್, ಹಮೀದ್ ಅಮ್ಮಿ, ದೀಪಕ್ ಪಿಲಾರ್, ವಿನೋದ್ ಶೆಟ್ಟಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News