ಮಂಗಳೂರು ಸೆಂಟ್ರಲ್- ತಿರುವನಂತಪುರಂ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ

Update: 2024-03-12 05:28 GMT

ಮಂಗಳೂರು, ಮಾ.12: ಮಂಗಳೂರು ಸೆಂಟ್ರಲ್- ಕಾಸರಗೋಡು- ತಿರುವನಂತಪುರಂ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮಂಗಳವಾರ ಬೆಳಗ್ಗೆ ಪ್ರಧಾನಿಯವರು ವೀಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.

ದೇಶದಲ್ಲಿ 10 ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ, ಈ ರೈಲುಗಳ ಮೂಲಕ ರೈಲ್ವೆ ಕ್ಷೇತ್ರಕ್ಕೆ ಕಾಯಕಲ್ಪ ಒದಗಿಸಲಾಗಿದೆ. ಇದು ಮೋದಿಯ ಗ್ಯಾರಂಟಿ ಆಗಿದೆ ಎಂದರು.

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ವಂದೇ ಭಾರತ್ ರೈಲಿಗೆ ಗ್ರೀನ್ ಸಿಗ್ನಲ್ ನೀಡಿದರು.

ಈ ಸಂದರ್ಭ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಸಕ ಡಿ.ವೇದವ್ಯಾಸ ಕಾಮತ್, ವಿಧಾನ ಪರಿಷತ್ ವಿಪಕ್ಷ ಉಪ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.






 


 


Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News