ಮಂಗಳೂರು: ಖಾಸಗಿ ಹೋಟೆಲ್ ನ ಈಜುಕೊಳದಲ್ಲಿ ಬ್ಯಾಂಕ್ ಅಧಿಕಾರಿಯ ಮೃತದೇಹ ಪತ್ತೆ
Update: 2023-09-11 05:20 GMT
ಮಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಹೊಟೇಲ್ನ ಈಜು ಕೊಳದಲ್ಲಿ ಯೂನಿಯನ್ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್. ನಾಯರ್ ಮೃತಪಟ್ಟ ಅಧಿಕಾರಿಯಾಗಿದ್ದಾರೆ.
ಇವರು ರವಿವಾರ ಮಂಗಳೂರಿಗೆ ಆಗಮಿಸಿ ಈ ಹೊಟೇಲ್ನಲ್ಲಿ ತಂಗಿದ್ದು, ಸಂಜೆ 4ರ ವೇಳೆ ಹೊಟೇಲ್ ರೂಮ್ನಿಂದ ಹೊರ ಹೋಗಿದ್ದರು ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.