ಮಂಗಳೂರು: ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಕೃಷ್ಣಾಪುರದ ಫಾತಿಮಾ ನೂರಾ ಫ್ರಥಮ

Update: 2023-08-31 06:37 GMT

ಮಂಗಳೂರು: ಬಳ್ಳಾರಿಯಲ್ಲಿ ನಡೆದ ರಾಷ್ಟ್ರೀಯ ಆಹ್ವಾನಿತರ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಕೃಷ್ಣಾಪುರದ ಫಾತಿಮಾ ನೂರಾ ವಿಜಯಿಯಾಗಿದ್ದಾರೆ.

ಸಾಂಪ್ರದಾಯಿಕ ಶೋಟೋಕಾನ್ ಕರಾಟೆ ಅಕಾಡೆಮಿ ಕರ್ನಾಟಕ ಇದರ ವತಿಯಿಂದ ಆಗಸ್ಟ್ 26,27 ರಂದು ಬಳ್ಳಾರಿಯ ವಾಲ್ಮೀಕಿ ಭವನದಲ್ಲಿ ಆಯೋಜಿಸಲಾಗಿದ್ದ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿ ಟ್ರೋಫಿ ಪಡೆದುಕೊಂಡಿದ್ದಾರೆ.

ಕೃಷ್ಣಾಪುರ ನಿವಾಸಿ MD ಅಬ್ದುಲ್ ಮುತ್ತಲಿಬ್ ಅವರ ಪುತ್ರಿಯಾಗಿರುವ ನೂರಾ ಎಸ್ಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆಯ ಸಾಧನೆಗೆ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮತ್ತು ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.

ನದೀಮ್ ಹಾಗೂ ಸರ್ಫ್ರಾಝ್ ಎಕೆ ಇವರಿಂದ ಫಾತಿಮಾ ನೂರಾ ತರಬೇತಿ ಪಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News