ಮಂಗಳೂರು: ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ

Update: 2023-07-30 13:58 GMT

ಮಂಗಳೂರು, ಜು.30: ಈಜಲು ಹೋಗಿದ್ದ ಆರು ಮಂದಿ ಯುವಕರ ಪೈಕಿ ಇಬ್ಬರು ನಾಪತ್ತೆಯಾಗಿರುವ ಘಟನೆ ರವಿವಾರ ಸಂಜೆ ಅಳಪೆ ಪಡ್ಪು ಬಳಿ ನಡೆದಿರುವುದು ವರದಿಯಾಗಿದೆ.

ಅಳಪೆ ಸ್ಥಳೀಯ ನಿವಾಸಿಗಳಾದ ವರುಣ್ (26) ಮತ್ತು ವೀಕ್ಷಿತ್ (26) ನಾಪತ್ತೆಯಾದವರು ಎಂದು ತಿಳಿದು ಬಂದಿದೆ.

ಅಳಪೆಯ ಪಡ್ಪು ಬಳಿ ಇರುವ ನೀರು ತುಂಬಿರುವ ಕೆರೆಯಂತಿರುವ ಹೊಂಡದಲ್ಲಿ ವರುಣ್, ವೀಕ್ಷಿತ್ ಸೇರಿದಂತೆ ಆರು ಮಂದಿ ಯುವಕರು ತೆರಳಿದ್ದರು. ಇವರೆಲ್ಲ ನೀರಿಗಿಳಿದಿದ್ದರು. ಈ ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News