ಮಂಗಳೂರು: ಸಾಮಾಜಿಕ ಕಾರ್ಯಕರ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಸಂಘಪರಿವಾರದ ಕಾರ್ಯಕರ್ತನ ವಿರುದ್ಧ ದೂರು ದಾಖಲು

Update: 2024-03-15 09:45 GMT

ಸಂತು ಬೆದ್ರ 

ಮಂಗಳೂರು: ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಅಸುಂತ ಡಿಸೋಜ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಂಘಪರಿವಾರದ ಕಾರ್ಯಕರ್ತನ ವಿರುದ್ಧ ದೂರು ದಾಖಲಿಸಲಾಗಿದೆ.

ಸಂತು ಬೆದ್ರ ಎಂಬಾತನ ವಿರುದ್ಧ ಜನವಾದಿ ಮಹಿಳಾ ಸಂಘಟನೆಯ ನಿಯೋಗವು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ನಿಯೋಗದಲ್ಲಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಜಯಂತಿ ಬಿ. ಶೆಟ್ಟಿ, ಕಾರ್ಯದರ್ಶಿ ಭಾರತಿ ಬೋಳಾರ, ಅಸುಂತ ಡಿಸೋಜ, ಪ್ರಮಿಳಾ ದೇವಾಡಿಗ, ಪ್ರಮಿಳಾ ಶಕ್ತಿನಗರ, ಆಶಾ ಬೋಳೂರು, ಯೋಗಿತಾ ಉಳ್ಳಾಲ ಮುಂತಾದವರು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News