ಏ. 29 ರಂದು ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ
Update: 2025-04-12 14:22 IST
ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಏಪ್ರಿಲ್ 29 ರಂದು ಅಡ್ಯಾರ್ ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಅಪರಾಹ್ನ 3 ಗಂಟೆಗೆ ನಡೆಯಲಿದೆ.
ಮುಸ್ಲಿಮ್ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ.ಎಸ್.ಮೊಹಮ್ಮದ್ ಮಸೂದ್ ನೇತೃತ್ವದ ಕಾರ್ಯ ಕಾರಿ ಸಮಿತಿ ನೇತೃತ್ವದಲ್ಲಿ ಇಂದು ಸಭೆ ಸೇರಿ ತೀರ್ಮಾನಿಸಿದ್ದು, ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.