ಮುಡಿಪು: ನ.5 ರಂದು ಅಮ್ಮೆಂಬಳ ಬಾಳಪ್ಪ ಸಭಾಂಗಣ ಉದ್ಘಾಟನೆ, ರಕ್ತದಾನ ಶಿಬಿರ

Update: 2023-11-03 10:41 GMT

ಕೊಣಾಜೆ: ಅಮ್ಮೆಂಬಳ ಸೇವಾ ಸಹಕಾರಿ ಸಂಘ ನಿಯಮಿತ ಮುಡಿಪು ಮತ್ತು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಉಳ್ಳಾಲ ವಿಧಾನಸಭಾ ಕ್ಷೇತ್ರದ ಆಶ್ರಯದಲ್ಲಿ ಸ್ವಾತಂತ್ರ್ಯ ಸೇನಾನಿ ಡಾ. ಅಮ್ಮೆಂಬಳ ಬಾಳಪ್ಪ ಇವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಅಮ್ಮೆಂಬಳ ಸೇವಾ ಸಹಕಾರಿ ಸಂಘ ಮುಡಿಪು ಇದರ 'ಅಮ್ಮೆಂಬಳ ಬಾಳಪ್ಪ ಸಭಾಂಗಣ'ದ ಉದ್ಘಾಟನೆ ಹಾಗೂ ಯೇನೇಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಯೇನೆಪೋಯ ಆಯುರ್ವೇದಿಕ್ ಕಾಲೇಜು ದೇರಳಕಟ್ಟೆ ಮಂಗಳೂರು ಇದರ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ ಮತ್ತು ರಕ್ತದಾನ ಶಿಬಿರ ನ.5 ಭಾನುವಾರದಂದು ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮ್ಮೆಂಬಳ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಟಿ. ಜಿ..ರಾಜಾರಾಮ ಭಟ್ ವಹಿಸಿಕೊಳ್ಳಲಿದ್ದು, ಕರ್ನಾಟಕ ರಾಜ್ಯ ವಿಧಾನಸಭೆಯ ಅಧ್ಯಕ್ಷರಾದ ಯುಟಿ ಖಾದರ್ ಶುಭಾಶಂಶನೆಯ ನುಡಿಗಳನ್ನು ನೀಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಪತ್ರಕರ್ತರಾದ ಅಮ್ಮೆಂಬಳ ಆನಂದ ಇವರು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರು, ಮುಡಿಪು ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಪ್ರಶಾಂತ್ ಕಾಜವ, ಕುರ್ನಾಡು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲೊಲಾಕ್ಷಿ, ಕುರ್ನಾಡು ಗ್ರಾಮ ಪಂಚಾಯತಿ ಸದಸ್ಯರಾದ ಗೋಪಾಲ ಬಂಗೇರ ಮಿತ್ತಕೋಡಿ,ಕುಲಾಲ ಕುಂಬಾರರ ಯುವ ವೇದಿಕೆಯ ಸ್ಥಾಪಕರಾದ ಡಾ. ಅಣ್ಣಯ್ಯ ಕುಲಾಲ್, ದಾಸ್ ಪ್ರಮೋಷನ್ಸ್ ನ ಆಡಳಿತ ನಿರ್ದೇಶಕ ಅನಿಲ್ ದಾಸ್, ಯುವ ವೇದಿಕೆಯ ರಾಜ್ಯ ಗೌರವಾಧ್ಯಕ್ಷರಾದ ತೇಜಸ್ವಿರಾಜ್ ಮಂಗಳೂರು, ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕುಲಾಲ್, ಮುಡಿಪು ಕುಲಾಲ ಸಂಘದ ಅಧ್ಯಕ್ಷರಾದ ಪುಂಡರಿಕಾಕ್ಷ ಯು, ಯುವ ವೇದಿಕೆಯ ಉಳ್ಳಾಲದ ಅಧ್ಯಕ್ಷರಾದ ನವೀನ್ ಕುಲಾಲ್, ಕುಲಾಲ ಯುವ ವೇದಿಕೆಯ ಜಿಲ್ಲಾಧ್ಯಕ್ಷರಾದ ಸುಕುಮಾರ್ ಬಂಟ್ವಾಳ, ಮುಡಿಪು ಕುಲಾಲ ಸಂಘದ ಕಾರ್ಯದರ್ಶಿ ಸದಾನಂದ ಕುಲಾಲ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News