ದ.ಕ. ಜಿಲ್ಲೆಯಲ್ಲಿ ಪಡಿತರ ವಿತರಣೆ ಆರಂಭ

Update: 2024-10-17 17:21 GMT

ಮಂಗಳೂರು: ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಅಕ್ಟೋಬರ್ ತಿಂಗಳ ಪಡಿತರ ವಿತರಣೆಯು ಗುರುವಾರದಿಂದ ಆರಂಭಗೊಂಡಿದೆ.

ಸರ್ವರ್ ಅಳವಡಿಕೆಯಿಂದಾಗಿ ಈ ತಿಂಗಳ ಪಡಿತರ ವಿತರಣೆಯು ವಿಳಂಬವಾಗಿತ್ತು. ಈ ತಿಂಗಳ ಪಡಿತರವನ್ನು ಅ.31 ರೊಳಗೆ ಪಡಿತರ ಚೀಟಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಳ್ಳದೆ ಆಧಾರ್ ಬಯೋಮೆಟ್ರಿಕ್ ಮೂಲಕ ಪಡಿತರ ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News