ಹಜ್ ಯಾತ್ರೆಗೆ ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ ಇಲ್ಲ: ಅಶ್ರಫ್ ತಂಙಳ್

Update: 2024-09-30 18:13 GMT

ಮಂಗಳೂರು: ಪವಿತ್ರ ಹಜ್ ಯಾತ್ರೆ -೨೦೨೫ಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸುವ ಅಂತಿಮ ದಿನ ಸೆ.30ಕ್ಕೆ ಕೊನೆಗೊಂಡಿದ್ದು, ಅರ್ಜಿ ಸಲ್ಲಿಕೆ ಇನ್ನು ವಿಸ್ತರಣೆಯಾಗದು ಎಂದು ಕರ್ನಾಟಕ ರಾಜ್ಯ ಹಜ್ ಸಮಿತಿಯ ಸದಸ್ಯ ಸಯ್ಯದ್ ಅಶ್ರಫ್ ತಂಙಳ್ ಆದೂರು ತಿಳಿಸಿದ್ದಾರೆ.

ಹಜ್ ಯಾತ್ರೆಗೆ ಸಲ್ಲಿಸಲಾದ ಅರ್ಜಿಗಳ ಪರಿಶೀಲನೆ ಪ್ರಕ್ರಿಯೆ ಅ.3ರಂದು 4 ಗಂಟೆಯ ಒಳಗಾಗಿ ಪೂರ್ಣಗೊಳಿಸುವಂತೆ ಈಗಾಗಲೇ ಹಜ್ ಕಮಿಟಿ ಆಫ್ ಇಂಡಿಯಾ ಇದರ ಸಿಇಒ ಲಿಯಾಖತ್ ಅಲಿ ಅಫಾಕಿ ಅವರು ರಾಜ್ಯ ಹಜ್ ಸಮಿತಿಯ ಕಾರ್ಯನಿರ್ವಹಣಾಧಿಕಾರಿಗೆ ಕಳುಹಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಹಜ್ ಯಾತ್ರಾರ್ಥಿಗಳನ್ನು ಆರಿಸುವ ಡಿಜಿಟಲ್ ರ್ಯಾಂಡಮ್ ಆಯ್ಕೆ ಪ್ರಕ್ರಿಯೆ ಅ.4ರಂದು ಶುಕ್ರವಾರ 3:30ಕ್ಕೆ ಹೊಸದಿಲ್ಲಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಹಜ್ ಸಮಿತಿಯ ಸದಸ್ಯರಾದ ಸಯ್ಯದ್ ಅಶ್ರಫ್ ತಂಳ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News