ಬೆಳ್ತಂಗಡಿ: ರಸ್ತೆ ಅಪಘಾತ; ಬೈಕ್‌ ಸವಾರ ಮೃತ್ಯು

Update: 2024-06-01 14:09 GMT

ಬೆಳ್ತಂಗಡಿ: ಟಿಪ್ಪರ್ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ  ಮೃತಪಟ್ಟ ಘಟನೆ ಜೂ.1 ಶನಿವಾರ ಮಧ್ಯಾಹ್ನ ಹಳೇಕೋಟೆ ಸಮೀಪ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

ಮೃತ ಬೈಕ್ ಸವಾರನನ್ನು ಬಳ್ಳಮಂಜ ನಿವಾಸಿ ಎಂದು ಗುರುತಿಸಲಾಗಿದೆ. ಈತ  ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆ ಹೋಗುತ್ತಿದ್ದ ವೇಳೆ ಮಣ್ಣು ತುಂಬಿದ್ದ ಟಿಪ್ಪರ್ ಅನ್ನು ಚಾಲಕ ಕೆಲಸ ನಡೆಯುತ್ತಿದ್ದಲ್ಲಿಗೆ ತಿರುಗಿಸುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬೈಕ್ ಟಿಪ್ಪರ್ ನ ಅಡಿಗೆ ಸಲುಕಿಕೊಂಡು ನುಜ್ಜುಗುಜ್ಜಾಗಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. 

ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News