ಪುತ್ತೂರು| ಪ್ರತ್ಯೇಕ ಘಟನೆ: ಇಬ್ಬರು ಆತ್ಮಹತ್ಯೆ

Update: 2023-12-04 09:08 GMT

ಪುತ್ತೂರು: ಎರಡು ಪ್ರತ್ಯೇಕ ಘಟನೆಯಲ್ಲಿ ಪಂಚಾಯತ್ ಸದಸ್ಯರೊಬ್ಬರ ಸಹಿತ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನಲ್ಲಿ ವರದಿಯಾಗಿದೆ.

ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ ಶಂಕರ ಮಾಡನ್ನೂರು(48) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು 5 ವರ್ಷಗಳ ಹಿಂದೆ ಸಾಲ ಮಾಡಿ ಜಮೀನು ಖರೀದಿ ಮಾಡಿದ್ದು, ಸಾಲ ಮರುಪಾವತಿಲು ಸಾದ್ಯವಾಗದೆ ಡಿ.3ರಂದು ರಾತ್ರಿ ಮನೆ ಮಂದಿ ಮಲಗಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಆನಂದ ಗೌಡ ಎಂಬವರ ಪುತ್ರ ಪ್ರೀತಂ ಗೌಡ ( 26)ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಳ್ಯದ ಖಾಸಗಿ ಬ್ಯಾಂಕ್ ನಲ್ಲಿ ಮೆನೇಜರ್ ಆಗಿರುವ ಪ್ರೀತಂ ಅವರು ಡಿ.2ರಂದು ರಾತ್ರಿ ತನ್ನ ಮನೆಯ ಮುಂಭಾಗದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ತಂದೆ, ತಾಯಿ ಹಾಗೂ ಓರ್ವ ಸಹೋದರ ನನ್ನು ಅಗಲಿದ್ದಾರೆ.

ಈ ಎರಡು ಪ್ರಕರಣಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News