ಉಳ್ಳಾಲ ಸೇತುವೆಯಲ್ಲಿ ಸರಣಿ ಅಪಘಾತ: 7 ವಾಹನಗಳಿಗೆ ಹಾನಿ, ಇಬ್ಬರಿಗೆ ಗಾಯ

Update: 2023-10-16 16:20 GMT

ಮಂಗಳೂರು, ಅ.16: ಉಳ್ಳಾಲ (ನೇತ್ರಾವತಿ) ಸೇತುವೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ಲಾರಿ, ಕಾರು, ಆಟೊ ರಿಕ್ಷಾ ಸಹಿತ ಏಳು ವಾಹನಗಳಿಗೆ ಹಾನಿಯಾಗಿವೆ. ಅಲ್ಲದೆ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ನಗರದ ಪಂಪ್‌ವೆಲ್‌ನಿಂದ ತೊಕ್ಕೊಟ್ಟು ಕಡೆಗೆ ತೆರಳುವ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಡೀಸೆಲ್ ಖಾಲಿಯಾಗಿ ಲಾರಿಯೊಂದು ನಿಂತಿತ್ತು. ಸೋಮವಾರ ಸಂಜೆಯ ವೇಳೆ ನಗರದಲ್ಲಿ ಭಾರೀ ಮಳೆಯಾಗಿದ್ದು, ಈ ಸಂದರ್ಭ ನಿಂತಿದ್ದ ಲಾರಿಯನ್ನು ಗಮನಿಸದ ಸ್ವಿಪ್ಟ್ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಇದರ ಹಿಂದಿನಿಂದ ಬರುತ್ತಿದ್ದ ಕೇರಳ ನೋಂದಣಿಯ 3 ಕಾರು ಒಂದಕ್ಕೊಂದು ಢಿಕ್ಕಿಯಾಗಿದೆ. ಅಲ್ಲದೆ ಪಿಕಪ್, ಬಸ್ ಕೂಡಾ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಮಳೆ ಸುರಿಯುತ್ತಿದ್ದ ಕಾರಣ ಒಂದರ ಹಿಂದೆ ಒಂದರಂತೆ ವಾಹನಗಳು ಸಾಲಾಗಿ ಚಲಿಸುತ್ತಿದ್ದವು. ಹಾಗೇ ಒಂದಕ್ಕೊಂದು ಢಿಕ್ಕಿಯಾಗಿದ್ದು, 7 ವಾಹನಗಳಿಗೆ ಹಾನಿಯಾಗಿವೆ. ಇದರಲ್ಲಿ 3 ಕಾರು, ಬಸ್‌ಗೆ ಭಾರೀ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಾಗಿವೆ.










 


 


 


 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News