ಚಂದ್ರಯಾನ-3 ಯಶಸ್ವಿಗೆ ಮಸೀದಿಗಳಲ್ಲಿ ಪ್ರಾರ್ಥಿಸಲು ರಾಜ್ಯ ದಾರಿಮಿ ಉಲಮಾ ಒಕ್ಕೂಟ ಕರೆ

Update: 2023-08-23 08:22 GMT

ಮಂಗಳೂರು: ದೇಶವೇ ಕಾತರದಿಂದ ಕಾಯುತ್ತಿರುವ ಚಂದ್ರಯಾನ -3 ರ ವಿಕ್ರಮ್ ಲ್ಯಾಂಡರ್ ನ ಸುರಕ್ಷಿತ ಲ್ಯಾಂಡಿಂಗ್ ಗಾಗಿ ಪ್ರತೀ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ನಡೆಸುವಂತೆ ರಾಜ್ಯ ದಾರಿಮಿ ಒಕ್ಕೂಟ ಕರೆ ನೀಡಿದೆ.

ದೇಶದ ಕೀರ್ತಿ ಬಾನೆತ್ತರಕ್ಕೇರಿ ಆ ಮೂಲಕ ದೇಶದ ಪ್ರಜೆಗಳು ಅಭಿಮಾನ ಪಡುವಂತಾಗಲು ಚಂದ್ರಯಾನ ಯಶಸ್ವಿಯಾಗಬೇಕಿದೆ.

ಇದಕ್ಕಾಗಿ ರಾತ್ರಿ ಹಗಲೆನ್ನದೇ ದುಡಿದ ವಿಜ್ಞಾನಿಗಳ,ಸಿಬ್ಬಂದಿ ವರ್ಗದವರ ಒಳಿತಿಗಾಗಿ ಕೂಡಾ ಪ್ರಾರ್ಥನೆ ನಡೆಸಲು ಸಂಘಟನೆ ಕರೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News