ವಿಟ್ಲ: ವಿಷ ಸೇವಿಸಿದ ಸಹೋದರರಿಬ್ಬರ ಸ್ಥಿತಿ ಗಂಭೀರ

Update: 2023-09-13 13:33 GMT

ಸಾಂದರ್ಭಿಕ ಚಿತ್ರ

ಬಂಟ್ವಾಳ: ಕೇಪು ಗ್ರಾಮದ ಕುದ್ದುಪದವು ನಿವಾಸಿಗಳಾದ ಸಹೋದರರಿಬ್ಬರು ವಿಷ ಸೇವನೆ ಮಾಡಿ ಆಸ್ಪತ್ರೆಗೆ ದಾಖಲಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ.

ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿ ರಾಜ್ ವಿಷ ಸೇವನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಎರಡು ಪ್ರತ್ಯೇಕ ತುರ್ತು ವಾಹನಗಳ ಮೂಲಕ ವಿಟ್ಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚುವರಿ ಚಿಕಿತ್ಸೆಗಾಗಿ ವರ್ಗಾವಣೆ ಮಾಡಲಾಗಿದೆ.

ಅವರ ತಂದೆ ತೀರಿಕೊಂಡಿದ್ದು, ತಾಯಿ ಮೈರದಲ್ಲಿ ವಾಸವಾಗಿದ್ದಾರೆ. ಅಜ್ಜಿ ಮನೆಯಲ್ಲಿ ಹೋದರರಿಬ್ಬರು ವಾಸವಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News