ಉಪ್ಪಿನಂಗಡಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸೈಯದ್ ಸಾದಾತ್ ತಂಙಳ್ ಕರ್ವೇಲ್ ನಿಧನ

Update: 2024-02-16 04:08 GMT

ಉಪ್ಪಿನಂಗಡಿ, ಫೆ.16: ಹನ್ನೆರಡು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧಾರ್ಮಿಕ ವಿದ್ವಾಂಸ ಸೈಯದ್ ಸಾದಾತ್ ಅಲಿ ತಂಙಳ್ ಕರ್ವೇಲ್ ಇಂದು(ಫೆ.16) ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಫೆ.5ರಂದು ಸಾದಾತ್ ಅಲಿ ತಂಙಳ್ ಸಂಚರಿಸುತ್ತಿದ್ದ ಆಟೊ ರಿಕ್ಷಾವು ಪುತ್ತೂರು ತಾಲೂಕು ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿತ್ತು. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸಾದಾತ್ ಅಲಿ ತಂಙಳ್ ರಿಗೆ ಗಂಭೀರ ಗಾಯಗಳಾಗಿತ್ತು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಎಸ್.ಎಂ.ಎ ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್ ಅಧ್ಯಕ್ಷರಾಗಿದ್ದ ತಂಙಳ್ ವಿವಿಧ ಧಾರ್ಮಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.

ಒಂದೇ ಕುಟುಂಬದಲ್ಲಿ ಎರಡು ಮರಣ: ಸಾದತ್ ಅಲಿ ತಂಙಳ್ ಅವರ ಸಹೋದರಿಯ ಮಗಳು ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಳು. 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News