ವಿಟ್ಲ | ಪುಣಚದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ: 7 ಮಂದಿ ಕಾರ್ಮಿಕರಿಗೆ ಗಾಯ

Update: 2024-04-15 08:41 GMT

ವಿಟ್ಲ, ಎ.15: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ ಏಳು ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಪುಣಚ ಗ್ರಾಮದ ಬರೆಂಜ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿ ಎಂಬಲ್ಲಿ ಇಂದು ನಡೆದಿದೆ.

ಈ ಸೇತುವೆಯ ಕೊನೆಯ ಹಂತದ ಸ್ಲ್ಯಾಬ್ ನಿರ್ಮಾಣಕ್ಕಾಗಿ ಕಾಂಕ್ರಿಟ್ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾಂಕ್ರಿಟ್ ಕಾಮಗಾರಿಗಾಗಿ ಸೇತುವೆ ತಳಭಾಗದಿಂದ ತಾತ್ಕಾಲಿಕವಾಗಿ ಅಳವಡಿಸಿದ್ದ ಕಬ್ಬಿಣದ ರಾಡ್ ಆಕಸ್ಮಿಕವಾಗಿ ಜಾರಿದ್ದರಿಂದ ಕಬ್ಬಿಣದ ರಾಡ್, ಕಾಂಕ್ರಿಟ್ ಮಿಕ್ಸ್ ಎಲ್ಲವೂ ಕುಸಿದುಬಿದ್ದಿದೆ. ಈ ವೇಳೆ ಕೆಲಸದಲ್ಲಿ ನಿರತರಾಗಿದ್ದ ಏಳು ಮಂದಿ ಅದರಡಿಯಲ್ಲಿ ಸಿಲುಕಿದ್ದರು. ಅವರನ್ನು ಸ್ಥಳದಲ್ಲಿದ್ವವರು ರಕ್ಷಿಸಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News