ರಾಜಕೀಯ ದುರುದ್ದೇಶದಿಂದ ಜನರಿಗೆ ತಪ್ಪು ತಿಳಿವಳಿಕೆ ಮೂಡಿಸಲು ಬಿಜೆಪಿಯಿಂದ ಪಾದಯಾತ್ರೆ : ಜಿ.ಪರಮೇಶ್ವರ್

Update: 2024-07-28 10:11 GMT

ದಾವಣಗೆರೆ : ಕಾಂಗ್ರೆಸ್ ಪಕ್ಷವು ರಾಜ್ಯದ ಸಂಪತ್ತು ಲೂಟಿ ಮಾಡಿದವರ ಹಾಗೂ ಕಾನೂನು ಬಾಹಿರವಾಗಿ ಗಣಿಗಾರಿಕೆ ವಿರುದ್ದ ರಾಜ್ಯದಲ್ಲಿ ಪಾದಯಾತ್ರೆ ಮಾಡಿದೆ. ಅದರೆ, ಬಿಜೆಪಿಯವರು ಅನಾವಶ್ಯಕವಾಗಿ ರಾಜಕೀಯ ದುರುದ್ದೇಶದಿಂದ ಜನರಿಗೆ ತಪ್ಪು ತಿಳಿವಳಿಕೆ ಮೂಡಿಸಲು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಎಂದು ಹೇಳಿದರು.

ನಗರದ ಮಾಧ್ಯಮದ ಜೊತೆ ಮಾತನಾಡಿದ ಅವರು, "ಮುಡಾ ಹಗರಣದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆದೇಶ ನೀಡಿದ್ದಾರೆ.‌ ಅದರೂ ಸಹ ಬಿಜೆಪಿಯವರು ಅನಾವಶ್ಯಕವಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ. ಅಲ್ಲದೇ ಜನರಲ್ಲಿ ಸರಕಾರದ ವಿರುದ್ದ ತಪ್ಪು ತಿಳಿವಳಿಕೆ ಮೂಡಿಸುತ್ತಿದ್ದಾರೆ" ಎಂದರು

ಜನರಿಗೆ ಸತ್ಯ ತಿಳಿಸುವ ಸಲುವಾಗಿ ಮುಖ್ಯಮಂತ್ರಿಗಳು ಕಮೀಷನ್ ನೇಮಿಸಿದ್ದಾರೆ. ಯಾವುದೇ ಕಾನೂನು ಬಾಹಿರ ಕೆಲಸ ಅಗಿಲ್ಲ. ಜನರಿಗೆ ಸತ್ಯ ತಿಳಿಸಲು ಕಮಿಷನ್ ನೇಮಿಸಿ ತನಿಖೆ ಕೈಗೊಂಡಿದ್ದಾರೆ. ಇದರಿಂದ ಜನರಿಗೆ ನಿಜ ತಿಳಿಯಲಿದೆ ಎಂದು ತಿಳಿಸಿದರು.

ನಾಯಿ ಮಾಂಸ ಅಲ್ಲ, ಮೇಕೆ ಮಾಂಸ :ರೈಲುಗಳ ಮೂಲಕ ಮಾಂಸ ಸರಬರಾಜು ಪ್ರಕರಣ ಬಗ್ಗೆ ಉತ್ತರಿಸಿದ ಅವರು, ರಾಜಸ್ಥಾನದ ಮಾಂಸ ಮಾರಾಟಗಾರರು ಮೇಲೆ ನಾಯಿ ಮಾಂಸ ಮಾರಾಟ ಮಾಡುತ್ತಿದ್ದಾರೆ ಎಂದು ಅಪಾದನೆ ಮಾಡಲಾಗಿತ್ತು.ಅದರೆ, ವರದಿ ಕೈಸೇರಿದ್ದು ಅದು ಮೇಕೆ ಮಾಂಸ ಎಂದು ಗೊತ್ತಾಗಿದೆ ಎಂದು ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News