ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ : ಸರಕಾರದಿಂದ 5 ಲಕ್ಷ ರೂ.ಪರಿಹಾರ ಮಂಜೂರು

Update: 2024-10-18 15:10 GMT

 ಅಂಜಲಿ ಅಂಬಿಗೇರ

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಎಂಬ ಯುವತಿಯ ಹತ್ಯೆ ಪ್ರಕರಣ ಸಂಬಂಧ ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಪರಿಹಾರವನ್ನು ಮಂಜೂರು ಮಾಡಿ, ಹಣ ತಲುಪಿಸಿರುವುದಾಗಿ ರಾಜ್ಯ ಸರಕಾರ ಆದೇಶದಲ್ಲಿ ತಿಳಿಸಿದೆ.

ಹುಬ್ಬಳ್ಳಿಯಲ್ಲಿ ನಡೆದ 20 ವರ್ಷದ ಅಂಜಲಿ ಅಂಬಿಗೇರ ಅವರ ಕೊಲೆ ಪ್ರಕರಣದ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡುವಂತೆ ಕೋರಿದ್ದರು.

ಈ ಹಿನ್ನೆಲೆಯಲ್ಲಿ ಪ್ರಕರಣದ ವರದಿಯನ್ನಾಧರಿಸಿ, ಐದು ಲಕ್ಷ ರೂ.ಗಳ ಪರಿಹಾರವನ್ನು ಮಂಜೂರು ಮಾಡಿ ಆರ್.ಟಿ.ಜಿ.ಎಸ್ ಮುಖಾಂತರ ಅಲ್ಲಿನ ಜಿಲ್ಲಾಧಿಕಾರಿಗಳ ಖಾತೆಗೆ ರವಾನಿಸಲಾಗಿದೆ. ಮೃತರ ಕಾನೂನು ಬದ್ಧ ನೈಜ ವಾರಸುದಾರರಿಗೆ ಪರಿಹಾರ ವಿತರಿಸಿದ ನಂತರ ಫಲಾನುಭವಿಯಿಂದ ಪಡೆದ ಸ್ವೀಕೃತಿ ಪತ್ರವನ್ನು ಸರಕಾರಕ್ಕೆ ಕಳುಹಿಸುವಂತೆ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಪಿ.ಎ.ಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News