ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದಿಲ್ಲ : ಬೊಮ್ಮಾಯಿ

Update: 2024-09-04 13:38 GMT

ಬಸವರಾಜ ಬೊಮ್ಮಾಯಿ

ಹಾವೇರಿ : ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದಿಲ್ಲ. ಆ ರೀತಿಯ ರಾಜಕೀಯ ಪರಿಸ್ಥಿತಿ ರಾಜ್ಯದಲ್ಲಿ ಇದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಸದಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ರಾಜಕೀಯ ಪರಿವರ್ತನೆ ಕಾಲ ನಡೆಯಲಿದೆ. ಎಲ್ಲ ಹಂತದಲ್ಲೂ ಬದಲಾವಣೆ ಆಗುತ್ತದೆ. ರಾಜ್ಯದ ಚುಕ್ಕಾಣಿ ಬದಲಾವಣೆ ಆದರೂ ಆಶ್ಚರ್ಯ ಏನು ಇಲ್ಲ. ನಮ್ಮವರೇ ನಮಗೆ ಶತ್ರುಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ. ನಾವು ಹಿಂದೆಯೇ ಅವರಿಗೆ ಹೇಳಿದ್ದೇವು. ಅವರಿಗೆ ತಡವಾಗಿ ಅನುಭವಕ್ಕೆ ಬಂದಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಎಲ್ಲವೂ ಸರಿ ಇದೆ ಅಂತಾ ದೋಣಿಯಲ್ಲಿ ಕುಳಿತ್ತಿದ್ದರು. ಈಗ ಕುಂತ ದೋಣಿಯಲ್ಲಿ ತೂತು ಕೊರೆಯುವ ಕೆಲಸ ನಡೆಯುತ್ತಿದೆ. ರಾಜಕೀಯ ಅನುಭವ ಬಳಸಿಕೊಂಡು ಯಾವ ರೀತಿ ಹೋರಾಟ ಮಾಡುತ್ತಾರೆ ಎಂದು ನೋಡೋಣ. ಮುಡಾ ವಿಚಾರದಲ್ಲಿ ಕಾನೂನು ಹೋರಾಟ ಬಹಳ ಪ್ರಾಮುಖ್ಯತೆ ಹೊಂದಿದ್ದು, ಅದರ ಜೊತೆಗೆ ರಾಜಕೀಯ ಹೋರಾಟವು ಇದೆ. ಸಿದ್ದರಾಮಯ್ಯ ಮುಂದೆ ಏನು ಮಾಡುತ್ತಾರೆ ಕಾದು ನೋಡೊಣ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಆಪರೇಷನ್ ಕಮಲ ಮಾಡುವ ಅಶ್ಯಕತೆಯಿಲ್ಲ. ನಮ್ಮ ಬಳಿ ಅಷ್ಟು ಸಂಖ್ಯಾ ಬಲ ಇಲ್ಲ. ಆದರೆ, ದೊಡ್ಡ ಪ್ರಮಾಣದ ರಾಜಕೀಯ ಬದಲಾವಣೆ ಅಂತು ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸೆ.6ರಂದು ರಾಜ್ಯಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಲಿದೆ. ಅದಕ್ಕೂ ಪೂರ್ವದಲ್ಲಿ ಸವಣೂರು ಹಾಗೂ ಶಿಗ್ಗಾವಿ ತಾಲೂಕಿನ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಬೇಕೆಂದು ಎರಡೂ ತಾಲೂಕು ಅಧ್ಯಕ್ಷರು ಹಾಗೂ ಪಕ್ಷದ ಕಾರ್ಯಕರ್ತರು ಅಪೇಕ್ಷೆ ಪಟ್ಟಿರುವುದರಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಡುತ್ತಿದ್ದೇವೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News