ಬಿಜೆಪಿ ಹೈಕಮಾಂಡ್, ಜೆಡಿಎಸ್ ನಿಂದ ನಮ್ಮ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ: ಸಿಎಂ ಸಿದ್ದರಾಮಯ್ಯ

Update: 2024-08-30 11:11 GMT

ಹುಬ್ಬಳ್ಳಿ :ವಿಜಯೇಂದ್ರ ಕೇಳಿದ ಕೂಡಲೇ ನಾನು ರಾಜೀನಾಮೆ ಕೊಡಬೇಕಾ? ಮುಡಾ ಹಗರಣದಲ್ಲಿ ಯಾಕೆ ರಾಜೀನಾಮೆ ಕೊಡಬೇಕು? ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂತಾ ನಾನು ಹೇಳುತ್ತೇನೆ. ಹಾಗೆ ನೋಡಿದರೆ ವಿಜಯೇಂದ್ರ ರಾಜೀನಾಮೆ ಕೊಡಬೇಕು. ಅವರು ರಾಜೀನಾಮೆ ಕೊಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ತಪ್ಪೇ ಮಾಡಿಲ್ಲ. ಮುಡಾ ಹಗರಣದ ಕುರಿತು ನಾಳೆ ವಿಚಾರಣೆ ಇದೆ.ವಿಚಾರಣೆ ಮುಗಿಯಲಿ ನೋಡೋಣ . ನಾಳೆ ಶಾಸಕರು, ಸಂಸದರು, ಎಂಎಲ್ ಸಿ ಗಳು ರಾಜ್ಯಪಾಲರನ್ನು ಭೇಟಿಯಾಗ್ತಾರೆ. ಕುಮಾರಸ್ವಾಮಿ, ನಿರಾಣಿ, ಜನಾರ್ದನ ರೆಡ್ಡಿ ವಿರುದ್ದ ಪ್ರಾಸಿಕ್ಯೂಷನ್ ಗೆ ಒತ್ತಾಯ ಮಾಡ್ತಾರೆ. ಕುಮಾರಸ್ವಾಮಿ ವಿರುದ್ಧ ತನಿಖೆ ಆಗಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಆದರೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿಲ್ಲ. ಹೀಗಾಗಿ ನಾಳೆ ನಮ್ಮ ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿ ಒತ್ತಾಯ ಮಾಡ್ತಾರೆ ಎಂದರು.

ಬಿಜೆಪಿ ಹೈಕಮಾಂಡ್ ಹಾಗೂ ಜೆಡಿಎಸ್ ನವರು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ನಮ್ಮ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಮಾಡಿದ್ದಾರೆ.ಬಿಜೆಪಿಯವರು ಎಂದೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ .ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ. ಹೀಗಾಗಿ ಮತ್ತೆ ಆಪರೇಷನ್ ಮಾಡೋ ಪ್ರಯತ್ನಗಳನ್ನು ನಡೆಸಿದ್ದಾರೆ ಎಂದರು.

ರವಿ ಗಣಿಗ ನನ್ನ ಮುಂದೆ ಕೂಡಾ ಶಾಸಕರಿಗೆ 100 ಕೋಟಿ ಆಫರ್ ಮಾಡಿರೋ ಬಗ್ಗೆ ಹೇಳಿದ್ದಾರೆ. ಅವರು ಮಾತಾಡಿರೋ ವಿಚಾರ ನನಗೂ ಹೇಳಿದರು. ಅದು ಸತ್ಯ ಇರಬಹುದು. ಯಾಕೆಂದರೆ ಬಿಜೆಪಿ ಯಾವಗಲೂ ಸಂಪೂರ್ಣ ಬಹಮತದಿಂದ ಅಧಿಕಾರಕ್ಕೆ ಬಂದಿಲ್ಲ. ಹಿಂಬಾಗಿಲ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ. ಹೀಗಾಗಿ ಸರ್ಕಾರ ಅಸ್ಥಿರ ಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

 ನಟ ದರ್ಶನ್‌ ಗೆ ಜೈಲಿನಲ್ಲಿ ರಾಜಾತಿಥ್ಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಿಚಾರ ಗೊತ್ತಾದ ತಕ್ಷಣ 9 ಜನರನ್ನು ಅಮಾನತ್ತು ಮಾಡಿದ್ದೇವೆ. ದರ್ಶನ್ ಸೇರಿ ಕೆಲವರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಿದ್ದೇವೆ. ಜೈಲಿನ ಡಿಜಿಗೂ ಕೂಡಾ ನೋಟಿಸ್ ಕೊಟ್ಟಿದ್ದೇವೆ ಎಂದರು.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News