ಹುಬ್ಬಳ್ಳಿ | ದರೋಡೆ ಪ್ರಕರಣ : ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧನ

Update: 2024-10-07 07:59 GMT

ಹುಬ್ಬಳ್ಳಿ : ದರೊಡೆಕೋರ ಗುಂಪಿನ​ ಸದಸ್ಯನೊಬ್ಬನ ಮೇಲೆ ಗೋಕುಲ ರೋಡ್ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಹೇಶ್ ಕಾಳೆ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗಿನ ಜಾವ ಆರೋಪಿ ಮಹೇಶ್‌ ಸೇರಿದಂತೆ ಈತನ ದರೋಡೆ ಗುಂಪು ಮನೆ ಕಳ್ಳತನಕ್ಕೆ ಇಳಿದಿತ್ತು. ಈ ವಿಚಾರ ತಿಳಿದು ಕಾರ್ಯಾಚರಣೆಗಿಳಿದ ಹುಬ್ಬಳ್ಳಿ ಪೊಲೀಸರು, ಆರೋಪಿ​ ಮಹೇಶ್‌ ಕಾಳೆಯನ್ನು ಬಂಧಿಸಿದ್ದು, ಈ ಸಂದರ್ಭದಲ್ಲಿ ಉಳಿದವರು ಪರಾರಿದ್ದಾರೆ ಎನ್ನಲಾಗಿದೆ.

ಬಳಿಕ ಉಳಿದ ದರೊಡೆಕೋರರು ಇರುವ ಜಾಗ ತೋರಿಸುತ್ತೇನೆ ಎಂದು ಮಹೇಶ್ ಕಾಳೆ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಈ ಮಧ್ಯೆ ಮಹೇಶ್​ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ. ಆತ್ಮ ರಕ್ಷಣೆಗಾಗಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್​ಐ ಸಚಿನ ದಾಸರೆಡ್ಡಿಯವರು ಆರೋಪಿ ಮಹೇಶ್ ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಗಾಯಗೊಂಡ ಆರೋಪಿ ಮಹೇಶ್​ನನ್ನು ಹುಬ್ಬಳ್ಳಿ ಕಿಮ್ಸ್​ಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್​​ಐ ಸಚಿನ್​ ಮತ್ತು  ಕಾನ್‌ಸ್ಟೇಬಲ್‌ ವಸಂತ ಗುಡಿಗೇರಿಗೆ ಅವರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News