ವಿಶ್ವಗುರುವಾಗಲು ಮುನ್ನುಗ್ಗುತ್ತಿದೆ ಮೋದಿ ನೇತೃತ್ವದ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Update: 2024-09-22 18:00 GMT

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ವಿಶ್ವಗುರು ಆಗುವತ್ತ ನಾಗಾಲೋಟದಲ್ಲಿ ಮುನ್ನುಗ್ಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಶಿಗ್ಗಾಂವಿ ಆಟೋ ರಿಕ್ಷಾ ನಿಲ್ದಾಣ ಹಾಗೂ ಹುಲರೂರ ರಸ್ತೆ ಅಂಗನವಾಡಿ ಬಳಿ ಏರ್ಪಡಿಸಿದ್ದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಮಾತನಾಡಿದರು. ಕಳೆದ ದಶಕದಿಂದ ಭಾರತ ಅಭಿವೃದ್ದಿಯಲ್ಲಿ ಹಿಂದೆಂದೂ ಕಂಡರಿಯದಷ್ಟು ಸಾಧನೆಗೈದಿದೆ. ಭಾರತ ವಿಶ್ವಗುರುವಾಗುವತ್ತ ದಾಪುಗಾಲಿಟ್ಟಿದೆ ಎಂದರು.

ಭಾರತವನ್ನು ವಿಶ್ವಗುರು ಆಗಿಸುವ ಧ್ಯೇಯದೊಂದಿಗೆ ಹೆಜ್ಜೆ ಹಾಕಿರುವ ಪ್ರಧಾನಿ ನರೇಂದ್ರ ಅವರ ನಾಗಾಲೋಟದಲ್ಲಿ ಪ್ರತಿಯೊಬ್ಬ ಭಾರತೀಯರು ಭಾಗಿಯಾಗಬೇಕು ಎಂದು ಸಚಿವ ಜೋಶಿ ಪ್ರೇರೇಪಿಸಿದರು.

ದೇಶದಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ಮೊಬೈಲ್ ಮೂಲಕವೂ ಸದಸ್ಯತ್ವ ನೋಂದಣಿ ಮಾಡಲಾಗುತ್ತಿದೆ ಎನ್ನುತ್ತ ಸಚಿವ ಪ್ರಹ್ಲಾದ್ ಜೋಶಿ ಅಭಿಯಾನಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಳ ಅಧ್ಯಕ್ಷ ವಿಶ್ವನಾಥ್ ಹರವಿ, ರಾಜ್ಯ ಬಿಜೆಪಿ ಓಬಿಸಿ ಪ್ರಧಾನ ಕಾರ್ಯದರ್ಶಿ ಸುಭಾಸ್ ಚವ್ಹಾಣ, ಶ್ರೀಕಾಂತ್ ದುಂಡಿಗೌಡರ, ಶಿವಾನಂದ ಮ್ಯಾಗೇರಿ, ಅಣ್ಣಪ್ಪ ಹೂಗಾರ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News