ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಗೆ ಗೆಲುವು

Update: 2024-06-04 16:16 GMT

ಧಾರವಾಡ : ಬಿಜೆಪಿಯ ಭದ್ರಕೋಟೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕೈ - ಕಮಲ ಪಕ್ಷಗಳ ಮಧ್ಯೆ ತೀವ್ರ ಜಿದ್ದಾಜಿದ್ದಿ ಪೈಪೋಟಿ  ಏರ್ಪಟ್ಟಿತ್ತು. ಹೀಗಿದ್ದರೂ ಕಾಂಗ್ರೆಸ್‌ನ​ ಹೊಸ ಮುಖ ವಿನೋದ್ ಅಸೂಟಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಹ್ಲಾದ್​ ಜೋಶಿ ''ಮತ ನೀಡಿ ಆಶೀರ್ವಾದ ಮಾಡಿದ ನಮ್ಮ ಕ್ಷೇತ್ರದ ಜನತೆಗೆ ಧನ್ಯವಾದಗಳು. ಜನತಾ ಜನಾರ್ದನ ಆಶಿರ್ವಾದದಿಂದ ಗೆಲುವಾಗಿದೆ. ಮತದಾರ ಪ್ರಭುಗಳಿಗೆ ಈ ಗೆಲುವು ಸಲ್ಲಬೇಕು. ಎಲ್ಲ ಕಾರ್ಯಕರ್ತರು ಮುಖಂಡರು ಸೇರಿ ಸಮರ್ಪಕವಾಗಿ ಕೆಲಸ ಮಾಡಿದ್ದಾರೆ. ಇಲ್ಲಿನ ಪ್ರತಿಸ್ಪರ್ಧಿಗಳು ಅಪಪ್ರಚಾರ ಮಾಡುತ್ತಾ ಬಂದರು. ಸಾಕಷ್ಟು ಹಣ ಹೆಂಡವನ್ನ ಹಂಚಿದ್ದಾರೆ. ಆದರೆ, ಜನರು ನಮ್ಮ ಕೈ ಹಿಡಿದಿದ್ದಾರೆ'' ಎಂದು ಜೋಶಿ ಹೇಳಿದರು.

''ಕರ್ನಾಟಕದ ಜನರು ಈಗಾಗಲೇ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಈಗಾಗಲೇ ದೇಶದಲ್ಲಿ 300 ಗಡಿ ದಾಡುವ ನಿಟ್ಟಿನಲ್ಲಿದ್ದೇವೆ. ಆದರೆ, ನಿರೀಕ್ಷೆ ತಕ್ಕಂತೆ ನಾವು ಅಂದುಕೊಂಡಂತೆ ಸೀಟು ಬಂದಿಲ್ಲ. ವಾಸ್ತವಿಕವಾಗಿ ಏನು ಆಗಿದೆ ಎನ್ನುವುದನ್ನು ನೋಡಬೇಕಾಗಿದೆ'' ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News