ರಾಜ್ಯ ಸರಕಾರ ಅತ್ಯಾಚಾರಿಗಳ ಪರ ನಿಂತಿದೆ: ಬೊಮ್ಮಾಯಿ ಆಕ್ರೋಶ

Update: 2024-01-20 10:36 GMT

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಸಾಮೂಹಿಕ ಅತ್ಯಾಚಾರ ಆಗಿದೆ. ಈ ಪ್ರಕರಣವನ್ನು ಖಂಡಿಸಿ ನಾವು ಇಂದು ಪ್ರತಿಭಟನೆ ಮಾಡುತ್ತಿದ್ದೇವೆ. ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿದ್ದರೂ ಪೊಲೀಸರು ಕಣ್ಣು ಮುಚ್ಚಿ ಕುಳಿತಿದ್ದಾರೆ. ಈ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸರಿಯಾದ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ ಆದರೆ ಇಲ್ಲಿಯವರೆಗೂ ಎಸ್ಐಟಿ ತನಿಖೆಗೆ ಪ್ರಕರಣವನ್ನು ಒಪ್ಪಿಸಿಲ್ಲ. ಅತ್ಯಾಚರಕ್ಕೆ ಒಳಗಾದ ಮಹಿಳೆಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡುವುದಕ್ಕೆ ಸಾಧ್ಯವಾಗಿಲ್ಲ. ಇಂತಹ ಘಟನೆಗಳು ನಡೆದಾಗ ಸರಕಾರ ಸಂತ್ರಸ್ತರಿಗೆ ಚಿಕಿತ್ಸೆ ಕೊಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಸರಕಾರವು ಸಂತ್ರಸ್ತೆ ಬಗ್ಗೆ ಜವಾಬ್ದಾರಿ ತೆಗದುಕೊಳ್ಳಬೇಕು. ಮುಖ್ಯಮಂತ್ರಿಗಳು ಶಾಸಕರಿಗೆ ಹೇಳಿದ್ದೇನೆ ಎಂದು ಹೇಳುತ್ತಾರೆ. ಅಂದರೆ ಸರಕಾರ, ಆರೋಗ್ಯ ಇಲಾಖೆ ಸತ್ತು ಹೋಗಿದೆಯೇ ಎಂದು ಪ್ರಶ್ನಿಸಿದರು.

ಪೊಲೀಸರೇ ಒಸಿ ಇಸ್ಪೀಟ್ ಅಡ್ಡೆಗಳನ್ನು ನಡೆಸುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಪೋಸ್ಟಿಂಗ್ ನಲ್ಲಿ ಹಣ ಕೊಟ್ಟಿರೋದು. ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರಿಗೂ ನ್ಯಾಯ ಕೊಟ್ಟಿಲ್ಲ. ದಲಿತರಿಗೂ ನ್ಯಾಯ ಕೊಟ್ಟಿಲ್ಲ. ಅಪರಾಧಿಗಳಿಗೆ ಮಾತ್ರ ರಕ್ಷಣೆ ಕೊಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News