ಗದಗ: ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು ತಂದೆ ಆತ್ಮಹತ್ಯೆ
Update: 2024-11-05 22:20 IST

ಗದಗ: ಕೌಟುಂಬಿಕ ಕಲಹಕ್ಕೆ ಬೇಸತ್ತು ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು, ತಂದೆ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಯಲ್ಲಿ ನಡೆದಿದೆ.
ಮುಂಡರಗಿ ತಾಲೂಕಿನ ಮುಕ್ತುಂಪುರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಹಾಗೂ ಆತನ ಮೂವರು ಮಕ್ಕಳು ನೀರು ಪಾಲಾಗಿದ್ದಾರೆ. ಪುಟ್ಟ ಮಕ್ಕಳಾದ ವೇದಾಂತ (3) ಪವನ (4) ಹಾಗೂ ಧನ್ಯಾ (6) ನೀರುಪಾಲಾದ ಮಕ್ಕಳು ಎಂದು ತಿಳಿದು ಬಂದುದೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಕ್ಕಳನ್ನು ಸೇತುವೆ ಮೇಲಿಂದ ನದಿಗೆ ಎಸೆದು ಮಂಜುನಾಥ್ ತಾನೂ ಸಹ ನದಿಗೆ ಹಾರಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಮುಂಡರಗಿ ಪೊಲೀಸರ ದೌಡಾಯಿಸಿದ್ದು, ಶೋಧಕಾರ್ಯಕ್ಕೆ ಮುಂದಾಗುತ್ತಿದ್ದಾರೆ.