ಗದಗ | ಆಟವಾಡುತ್ತಿದ್ದ ವೇಳೆ ಬೀದಿ ನಾಯಿ ದಾಳಿ : ಬಾಲಕನಿಗೆ ಗಂಭೀರ ಗಾಯ

Update: 2024-12-08 19:24 IST
ಗದಗ | ಆಟವಾಡುತ್ತಿದ್ದ ವೇಳೆ ಬೀದಿ ನಾಯಿ ದಾಳಿ : ಬಾಲಕನಿಗೆ ಗಂಭೀರ ಗಾಯ

ಸಾಂದರ್ಭಿಕ ಚಿತ್ರ

  • whatsapp icon

ಗದಗ : ಮನೆ‌ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದ ಬನಶಂಕರಿ ದೇವಸ್ಥಾನದ ಬಳಿ ನಡೆದಿದೆ.

ಇಂದು(ಡಿ.8) ಬೆಳಗ್ಗೆ ವೀರೆಶ್ ದೊಡ್ಡಕಾಶಿ ಅವರ ಮಗ ರುದ್ರಪ್ರಿಯ ಎಂಬ 3 ವರ್ಷದ ಬಾಲಕ ಮನೆ ಮುಂದೆ ಆಟವಾಡುತ್ತಿರುವ ವೇಳೆ ಏಕಾಏಕಿ ಬೀದಿನಾಯಿ ದಾಳಿ ಮಾಡಿದೆ. ಪುಟ್ಟ ಬಾಲಕನಿಗೆ ಮನ ಬಂದಂತೆ ಕಚ್ಚಿ ಗಾಯಗೊಳಿಸಿದೆ. ನಾಯಿ ದಾಳಿಗೆ ತುಟಿ, ಹಲ್ಲುಗಳು ಕಿತ್ತು ಬಂದಿವೆ. ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡುವುದನ್ನು ಗಮನಿಸಿದ ಸ್ಥಳೀಯರು ಬಾಲಕನನ್ನು ರಕ್ಷಣೆ ಮಾಡಿದ್ದಾರೆ.

ಬಾಲಕನ್ನು ತಕ್ಷಣ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನ ಬಾಯಿ, ಕಣ್ಣು, ತಲೆ, ಕೈ ಭಾಗಕ್ಕೆ ಗಂಭೀರ ಗಾಯವಾಗಿದೆ. ಸಾಕಷ್ಟು ರಕ್ತಸ್ರಾವವಾಗಿ ಮಗುವಿಗೆ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಬಾಲಕನಿಗೆ ಜಿಮ್ಸ್ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News