ದಮ್ಮಾಮ್: ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಶನ್ ನಿಂದ ಮೀಲಾದ್ ಪ್ರಯುಕ್ತ 'ಸ್ನೇಹ ಸಂಗಮ' ಕಾರ್ಯಕ್ರಮ

Update: 2024-10-01 05:26 GMT

ಸೌದಿ ಅರಬಿಯಾ: ಜೀವನದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.) ಅವರ ಜೀವನ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ ಎಂದು ಇಲ್ಯಾಸ್ ತಂಙಳ್ ಎಮ್ಮೆಮಾಡು ಕರೆ ನೀಡಿದ್ದಾರೆ.

ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಶನ್ ಸೌದಿ ಅರಬಿಯಾ ದಮ್ಮಾಮ್ ಝೋನಲ್ ಸಮಿತಿಯು ಮೀಲಾದುನ್ನಬಿ ಪ್ರಯುಕ್ತ ದಮ್ಮಾಮ್ ನಲ್ಲಿ ಆಯೋಜಿಸಿದ್ದ 'ಸ್ನೇಹ ಸಂಗಮ' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಪ್ರವಾದಿಯವರ ಜೀವನ ತೆರದ ಪುಸ್ತಕವಾಗಿದೆ. ಇಡೀ ಮಾನವ ಕುಲಕ್ಕೆ ಪ್ರವಾದಿ ಮುಹಮ್ಮದ್(ಸ.) ಪೈಗಂಬರ್ ಅವರ ಜೀವನವೂ ಮಾದರಿಯಾಗಿದೆ ಎಂದು ಇಲ್ಯಾಸ್ ತಂಙಳ್ ಹೇಳಿದರು.

ಮುಖ್ಯ ಅತಿಥಿಗಳಾಗಿ ಹಫೀಲ್ ಸಅದಿ ಕೊಡಗು ಹಾಗೂ ಹಂಝ ಉಸ್ತಾದ್ ಭಾಗವಹಿಸಿದ್ದರು.

ಈ ಸಂದರ್ಭ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಶನ್ ದಮ್ಮಾಮ್ ಝೋನಲ್ ವತಿಯಿಂದ ಇಲ್ಯಾಸ್ ತಂಙಳ್ ಮತ್ತು ಹಫೀಲ್ ಸಅದಿಯವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಶನ್ ದಮ್ಮಾಮ್ ಝೋನಲ್ ಅಧ್ಯಕ್ಷ ನಿಝಾಮ್ ಅಂಬಟ್ಟಿ, ಖಜಾಂಚಿ ಆದಂ ಕಂಡಕರೆ, ಕಾರ್ಯದರ್ಶಿ ಆಬಿದ್ ಝಹ್ಹರಿ, ಸಮಿತಿ ಸದಸ್ಯರಾದ ಫಾರೂಕ್ ಹೊಸಕೋಟೆ, ಕಲಂದರ್ ಹೊಸಕೋಟೆ, ಆಬಿದ್ ಕಂಡಕರೆ, ನಿಝಾಮ್, ಇರ್ಫಾನ್ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News