ಹಾಸನ | ಕಾಳು ಮೆಣಸು ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

Update: 2025-03-17 15:06 IST
ಹಾಸನ | ಕಾಳು ಮೆಣಸು ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಲಕ್ಷ್ಮಣ್

  • whatsapp icon

ಹಾಸನ : ಕಾಳು ಮೆಣಸು ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊರ್ವ ಮೃತ ಪಟ್ಟಿರುವ ಘಟನೆ ಹಾಸನದ ಆಲೂರು ತಾಲ್ಲೂಕಿನ ಕಾಮತಿ ಕೂಡಿಗೆಯಲ್ಲಿ ಹರಿಹರಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಲಕ್ಷ್ಮಣ್ (50 ) ಎಂದು ಗುರುತಿಸಲಾಗಿದೆ.

ಕೂಲಿ ಕೆಲಸಕ್ಕೆ ಬಂದಿದ್ದ ಲಕ್ಷ್ಮಣ್ ಕೆಲಸ ಮಾಡುತ್ತಿರುವಾಗಲೇ ಈ ಅವಘಡ ಸಂಭವಿಸಿದ್ದು, ಮೃತನ ಸಾವಿಗೆ ಜಮೀನು ಮಾಲಕರು ಹಾಗೂ ಕೆಇಬಿ ಅಧಿಕಾರಿಗಳು ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

 ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News