ಬೇಲೂರು: ಚೀಕನಹಳ್ಳಿ ಗ್ರಾಮ ಪಂಚಾಯತ್ ವಾಟರ್ ಮ್ಯಾನ್ ನ ಹತ್ಯೆ

Update: 2024-09-14 04:20 GMT

ಗಣೇಶ

ಹಾಸನ: ಬೇಲೂರು ತಾಲೂಕು ಚೀಕನಹಳ್ಳಿ ಗ್ರಾಮ ಪಂಚಾಯತ್ ವಾಟರ್ ಮ್ಯಾನ್ ನನ್ನು ರೌಡಿ ಶೀಟರ್ ಓರ್ವ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಗಣೇಶ (27) ಕೊಲೆಯಾದ ಯುವಕ. ಇದೇ ಗ್ರಾಮದ ರೌಡಿಶೀಟರ್ ಮಧು ಕೊಲೆ ಆರೋಪಿ.

ಚೀಕನಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ವಾಟರ್ ಮ್ಯಾನ್ ಆಗಿದ್ದ ಗಣೇಶ ನಿನ್ನೆ ರಾತ್ರಿ ಗ್ರಾಮದ ಆಟೋ ನಿಲ್ದಾಣದ ಬಳಿ ನಿಂತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಮಧು ಕ್ಷುಲ್ಲಕ ವಿಚಾರಕ್ಕೆ ಗಣೇಶರ ಜತೆ ಜಗಳಕ್ಕಿಳಿದಿದ್ದಾನೆ. ಅದು ವಿಕೋಪಕ್ಕೆ ತಿರುಗಿ ಮಧು ಚಾಕುವಿನಿಂದ ಗಣೇಶರಿಗೆ ಇರಿದಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಗಣೇಶ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೇರೆ ಊರಿನಲ್ಲಿ ನೆಲೆಸಿರುವ ಆರೋಪಿ ಮಧು ಗೌರಿ-ಗಣೇಶ ಹಬ್ಬಕ್ಕೆಂದು ಗ್ರಾಮಕ್ಕೆ ಬಂದಿದ್ದನು. ಕೊಲೆ ಕೃತ್ಯದ ಬಳಿಕ ಪರಾರಿಯಾಗಿ ತಲೆಮರೆಸಿಕೊಂಡಿದ್ದಾನೆ.

ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News