ಹಾಸನ ಲೋಕಸಭಾ ಕ್ಷೇತ್ರದಿಂದ ಎ.1ರಂದು ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ : ಶಾಸಕ ಶಿವಲಿಂಗೇಗೌಡ

Update: 2024-03-30 18:05 GMT

ಹಾಸನ: ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಎಪ್ರಿಲ್ 1ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ , ಚುನಾವಣಾ ಉಸ್ತುವಾರಿ ಚಂದ್ರಶೇಖರ್, ಸೇರಿದಂತೆ 8 ತಾಲೂಕಿನ ಲಕ್ಷಾಂತರ ಮಂದಿ ಮುಖಂಡರು ಕಾರ್ಯಕರ್ತರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದರು .

ದೇಶದಲ್ಲಿಯೇ ಉತ್ತಮ ಆಡಳಿತ ಹಾಗೂ ಜನಪರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಮುನ್ನಡೆಯುತ್ತಿದ್ದು, ಈ ಹಿನ್ನೆಲೆ ಈ ಬಾರಿಯ ಚುನಾವಣೆಯಲ್ಲಿ ಶ್ರೇಯಸ್ ಪಟೇಲ್ ರಾಜ್ಯದಲ್ಲಿಯೇ ಹೆಚ್ಚಿನ ಪ್ರಮಾಣದ ಮತಗಳನ್ನು ಪಡೆಯುವ ಮೂಲಕ ದಾಖಲೆ ನಿರ್ಮಿಸುವ ವಿಶ್ವಾಸವಿದೆ. ಜಿಲ್ಲೆಯ ಜನತೆ ಸಹಕಾರ ನೀಡುವ ಭರವಸೆ ಇದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News