ಹಾಸನ: ಕೆಎಸ್ಸಾರ್ಟಿಸಿ ಬಸ್- ಕಾರು ಢಿಕ್ಕಿ; ಮೂವರ ಸ್ಥಿತಿ ಚಿಂತಾಜನಕ

Update: 2024-06-21 09:09 GMT

ಹಾಸನ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು  ಮುಖಾಮುಖಿ ಢಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಚಿಂತಾಜನಕ ಸ್ಥಿತಿಯಲ್ಲಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬೇಲೂರು- ಹಾಸನ ರಸ್ತೆಯ ಕೀರಿಹಳ್ಳಿ ಗಡಿ ಬಳಿ ನಡೆದಿದೆ.

ಕಾರಿನಲ್ಲಿದ್ದ ದಾವಣಗೆರೆ ಮೂಲದ ಚೇತನ್, ನಾಗರಾಜ್, ಚೇತನ್ ಎಂಬವರ ಸ್ಥಿತಿ ಚಿಂತಾಜನಕವಾಗಿದೆ. ಪುನೀತ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅಪಘಾತದಲ್ಲಿ ಸಾರಿಗೆ ಬಸ್‌ ನಿರ್ವಾಹಕನ ಕಣ್ಣಿಗೆ ಬಲವಾದ ಗಾಯಗಳಾಗಿದ್ದು, ಬಸ್‌ನಲ್ಲಿದ್ದ ನಾಲ್ಕು ಪ್ರಯಾಣಿಕರು ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಹಾಸನದ ಹಿಮ್ಸ್ ಗೆ ದಾಖಲಿಸಲಾಗಿದೆ.

ಹಾಸನದ ಕಡೆಗೆ ಬರುತ್ತಿದ್ದ ಸಾರಿಗೆ ಬಸ್ ಹಾಗೂ ದಾವಣಗೆರೆಗೆ ತೆರಳುತ್ತಿದ್ದ  ಕಾರು ಮುಖಾಮುಖಿ ಢಿಕ್ಕಿಯಾಗಿದೆ. ಸ್ಥಳಕ್ಕೆ ಬೇಲೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News