ಹಾವೇರಿ: ಮರಕ್ಕೆ ಕಾರು ಢಿಕ್ಕಿ; ಇಬ್ಬರು ಮೃತ್ಯು

Update: 2024-07-13 06:20 GMT

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರು ಬೇವಿನ ಮರಕ್ಕೆ ಢಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ  ಶಿಗ್ಗಾವಿ ಪಟ್ಟಣದ ಬಳಿ ನಡೆದಿದೆ. 

ಮೃತರನ್ನುಸವಣೂರು ತಾಲೂಕು ಬೇವಿನಹಳ್ಳಿ ಗ್ರಾಮದ ನಿವಾಸಿಗಳಾಗಿರುವ ನೀಲಪ್ಪ ಮೂಲಿಮನಿ( 23), ಸುದೀಪ್ ಕೋಟಿ( 18) ಎಂದು ಗುರುತಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕು ನಂದಗಡಕ್ಕೆ ಹೊರಟಿದ್ದ ಯುವಕರ 7 ಜನರ ತಂಡ ಮುಂದೆ ಇದ್ದ ವಾಹನ ಓವರ್ ಟೇಕ್ ಮಾಡಲು ಹೋಗಿ ಅಪಘಾತವಾಗಿರಬಹುದು ಎಂದು ಶಂಕಿಸಲಾಗಿದೆ


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News