ಹಾವೇರಿ: ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ; ಮಹಿಳೆ ಮೃತ್ಯು

Update: 2024-07-18 04:01 GMT

ಹಾವೇರಿ: ರಸ್ತೆ ದಾಟುವ ವೇಳೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಗರದ ವಾಲ್ಮೀಕಿ‌ ವೃತ್ತದ ಬಳಿ  ನಡೆದಿದೆ.

ಮೃತ ಮಹಿಳೆಯನ್ನು ಇಜಾರಿ ಲಕಮಾಪುರದ ನಿವಾಸಿ ಜಯಮ್ಮ ಕೂಳೇನೂರ (31) ಎಂದು ಗುರುತಿಸಲಾಗಿದೆ. ಸರ್ಕಾರಿ ಮಹಿಳಾ ಹಾಸ್ಟೆಲ್ ನಲ್ಲಿ ಅಗುಡೆ ಕೆಲಸ ಮಾಡುತ್ತಿದ್ದರು.

ಪತಿ ರಸ್ತೆ ಪಕ್ಕ ನಿಂತು ಕರೆದ ಕಾರಣ ರಸ್ತೆ ದಾಟಲು ಹೋಗಿದ್ದ ಮಹಿಳೆಗೆ ಹುಬ್ಬಳ್ಳಿ ಯಿಂದ ಹಾವೇರಿಯತ್ತ ಬರುತ್ತಿದ್ದ ಸಾರಿಗೆ ಬಸ್ ಢಿಕ್ಕಿಯಾಗಿದೆ. ತಲೆಗೆ ಗಂಭೀರ ಗಾಯಗಳಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News