ಜು.27 ರಂದು ಪ್ರತಿಪಕ್ಷ ಮೈತ್ರಿಕೂಟ ‘INDIA’ ಸಂಸದರಿಂದ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ

Update: 2023-07-26 17:46 GMT

ಹೊಸದಿಲ್ಲಿ: ಮಣಿಪುರ ಹಿಂಸಾಚಾರವನ್ನು ಸಂಸತ್ನಲ್ಲಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರ ಅಸಮ್ಮತಿಯನ್ನು ಪ್ರತಿಭಟಿಸಿ ಪ್ರತಿಪಕ್ಷ ಮೈತ್ರಿಕೂಟ ‘ಇಂಡಿಯಾ’ದ ಎಲ್ಲಾ ಸಂಸದರು ಗುರುವಾರ ಕಪ್ಪುಬಟ್ಟೆಗಳನ್ನು ಧರಿಸಿ ಸಂಸತ್ ಕಲಾಪಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿಯವರು ಈತನಕ ಸಂಸತ್ನಲ್ಲಿ ಹೇಳಿಕೆ ನೀಡದೇ ಇರುವುದನ್ನು ಪ್ರತಿಭಟಿಸಲು ಕಪ್ಪುಬಟ್ಟೆಗಳನ್ನು ಧರಿಸಿ ಬರುವಂತೆ ಇಂಡಿಯಾ ಮೈತ್ರಿಕೂಟದ ಎಲ್ಲಾ ಸಂಸದರಿಗೆ ಸೂಚಿಸಲಾಗಿದೆ ಎಂದು ವಿಪಕ್ಷ ಸಂಸದರೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News