ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆ : ಇಂದು(ಮೇ.15) ಐದು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
Update: 2024-05-15 15:27 GMT
ಕಲಬುರಗಿ : ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ ಜೂ.3ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆ ದಿನವಾದ ಬುಧವಾರದಂದು ಐದು ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ: ಗವಿಸಿದ್ದಪ್ಪ ಚಂದ್ರಶೇಖರ್, ಕಾಶಿನಾಥ ಎಂ ಸೋಮಪ್ಪ, ಅಬ್ದುಲ್ ಜಬ್ಬಾರ್, ಶಶಿಧರ ಬಸವರಾಜ, ಶರಣಬಸಪ್ಪ ಶ್ರೀಮಂತಪ ಸ್ವತಂತ್ರಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ಮೇ 20ರಂದು ನಾಮಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನವಾಗಿದೆ. ಇಲ್ಲಿಯವರೆಗೆ 14 ಅಭ್ಯರ್ಥಿಗಳಿಂದ 17 ನಾಮಪತ್ರಗಳು ಸಲ್ಲಿಕೆಯಾಗಿವೆ.