ಕಲಬುರಗಿ | ಬ್ಯಾಂಕ್‌ನ ಬೀಗ ಮುರಿದು ಕಳ್ಳತನಕ್ಕೆ ಯತ್ನ : ಆರೋಪಿ ಸೆರೆ

Update: 2024-10-09 06:52 GMT

ಕಲಬುರಗಿ : ಚಿಂಚೋಳಿ ತಾಲ್ಲೂಕಿನ ನಿಡಗುಂದಾ ಗ್ರಾಮದಲ್ಲಿ ಬ್ಯಾಂಕ್‌ವೊಂದರ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಓರ್ವ ಆರೋಪಿಯನ್ನು ಸುಲೇಪೇಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕರ್ಚಖೇಡ್ ಗ್ರಾಮದ ನಿವಾಸಿ ತುಕ್ಕಪ್ಪ (26) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ನಿಡಗುಂದಾ ಗ್ರಾಮದಲ್ಲಿನ ಬ್ಯಾಂಕ್‌ನ ಬೀಗ ಮುರಿದು ಕಳ್ಳತನಕ್ಕೆ ಯತ್ನ ನಡೆದಿತ್ತು. ಈ ಸಂಬಂಧ ಕಳ್ಳತನಕ್ಕೆ ಯತ್ನ ನಡೆದಿದೆ ಎಂದು ಬ್ಯಾಂಕ್ ಮ್ಯಾನೇಜರ್ ರಾಜ ರಶ್ಮಿ ಎಂಬವರು ನೀಡಿದ ದೂರಿನ ಅನ್ವಯ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಕೊಡಲಿ, ಒಂದು ಸಣ್ಣ ಕಬ್ಬಿಣದ ಹಾರಿ, ಒಂದು ಕಬ್ಬಿಣದ ದೊಡ್ಡ ಹಾರಿ,  ಕಟಿಂಗ್ ಪ್ಲೇಯರ್, ಸ್ಕ್ರೂಡ್ರೈವರ್, ಚಾಕು, ದ್ವಿಚಕ್ರವಾಹನವನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸಿಸಿ ಟಿವಿ ಕ್ಯಾಮೆರಾ ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News