ಕಲಬುರಗಿ: ನದಿಗೆ ಉರುಳಿದ ಕಾರು; ಚಾಲಕ ಮೃತ್ಯು

Update: 2024-10-21 09:06 GMT

ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಗಿಣಾ ನದಿಗೆ ಉರುಳಿದ್ದು, ಚಾಲಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ಘಟನೆ ಚಿತ್ತಾಪುರ ತಾಲೂಕಿನ ದಂಡೋತಿ ಸಮೀಪದಲ್ಲಿ ನಡೆದಿದೆ.

ಚಿತ್ತಾಪುರ ಪಟ್ಟಣದ ಬಹಾರಪೇಟ್ ನಿವಾಸಿ ಕಾರು ಚಾಲಕ ನಿಂಗಪ್ಪ ಪೂಜಾರಿ (50) ಮೃತಪಟ್ಟ ವ್ಯಕ್ತಿ. ಕೃಷ್ಣಾ ಮತ್ತು ಉಮೇಶ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಳುಗಳಿಗೆ ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಸೇಡಂನಿಂದ ಚಿತ್ತಾಪುರಕ್ಕೆ ಬರುವಾಗ ರವಿವಾರ ರಾತ್ರಿಈ ಘಟನೆ ನಡೆದಿದೆ ಎನ್ನಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐ ಜಗದೇವಪ್ಪ ಪಾಳಾ, ಪಿಎಸ್'ಐ ಚೇತನ್, ಸಿಬ್ಬಂದಿಗಳಾದ ಕಮಲಾಕರ್, ಪ್ರಶಾಂತ, ಮಾಳಗೊಂಡ, ರಮೇಶ ಅವರು ಭೇಟಿ ನೀಡಿ ಪರೀಶಿಲನೆ ನಡೆಸಿದರು.

ಈ ಕುರಿತು ಮಾಡಬೂಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News