ಕಲಬುರಗಿ | ಟ್ರ್ಯಾಕ್ಟರ್‌ಗೆ ಬೈಕ್ ಢಿಕ್ಕಿ: ಮೂವರು ಮೃತ್ಯು

Update: 2024-10-09 09:07 GMT

ಕಲಬುರಗಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು  ಗುರುಜಿನಾಯಕ ತಾಂಡಾ ನಿವಾಸಿಗಳಾದ ಅರ್ಜುನ ಪಾಂಡು ರಾಠೋಡ್ (22)  ರೋಹಿತ್ ಮೋಹನ ಚವ್ಹಾಣ್‌ (18) ಮತ್ತು ಕೃಷ್ಣಾ ಯಂಕಪ್ಪ (21) ಎಂದು ಗುರುತಿಸಲಾಗಿದೆ.

 ಅರ್ಜುನ ಪಾಂಡು ರಾಠೋಡ್ (22) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ರೋಹಿತ್ ಮೋಹನ ಚವ್ಹಾಣ್‌ (18) ಮತ್ತು ಕೃಷ್ಣಾ ಯಂಕಪ್ಪ (21) ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂವರು ಲಾಡ್ಲಾಪುರ ಗ್ರಾಮದಿಂದ ತಾಂಡಾಕ್ಕೆ ಹೋಗುತ್ತಿರುವಾಗ ರಸ್ತೆಯ ಬದಿಯಲ್ಲಿ ನಿಂತಿರುವ ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

 ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಶಂಕರಗೌಡ ಪಾಟೀಲ್, ಪಿಎಸ್‌ಐ ತಿರುಮಲೇಶ ಮತ್ತು ಸಿಬ್ಬಂದಿ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News