ಕಲಬುರಗಿ | ಸಿಡಿಲು ಬಡಿದು ಇಬ್ಬರು ಮೃತ್ಯು

Update: 2024-05-26 14:41 GMT

ಸಾಂದರ್ಭಿಕ ಚಿತ್ರ

ಕಲಬುರಗಿ : ಮಳೆಯಿಂದ ಆಶ್ರಯ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಇಬ್ಬರು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಹೊಲದಲ್ಲಿ ರವಿವಾರ ನಡೆದಿರುವುದಾಗಿ ವರದಿಯಾಗಿದೆ.

ಮೃತರನ್ನು ಸತೀಶ್ ಪೆರ್ಲಾದ್ ಸೆಳಕೆ (40) ಹಾಗೂ ಪ್ರಕಾಶ್ ಏತ್ನಾಳ್ ವಾಗ್ಮೊರಿ (50) ಎಂದು ಗುರುತಿಸಲಾಗಿದೆ.

ಮೃತಪಟ್ಟ ಸತೀಶ್ ಹಾಗೂ ಪ್ರಕಾಶ್ ಅವರು ನಾಲವಾರ ಗ್ರಾಮದಿಂದ ವಾಡಿ ಪಟ್ಟಣಕ್ಕೆ ತೆರಳುವಾಗ ಮಳೆ ಹಾಗೂ ಗಾಳಿಯಿಂದ ಆಶ್ರಯ ಪಡೆಯಲು ಮರದ ಬಳಿ ನಿಂತಿರುವಾಗ ಸಿಡಿಲು ಬಡೆದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಿಎಸ್ಐ ಮಂಜುನಾಥ್ ರೆಡ್ಡಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News