ಕಲಬುರಗಿ: ನಿಂತಿದ್ದ ಲಾರಿಗೆ ಕಾರು ಢಿಕ್ಕಿ; ಮೂವರು ಮೃತ್ಯು
Update: 2025-04-27 10:48 IST

ಕಲಬುರಗಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ರವಿವಾರ ಬೆಳಗ್ಗೆ ಸೇಡಂ ತಾಲ್ಲೂಕಿನ ಮಳಖೇಡ ಬಳಿ ನಡೆದಿದೆ.
ಕಾರಿನಲ್ಲಿ ಸೇಡಂ ಕಡೆಯಿಂದ ಗುಂಡಗುರ್ತಿ ಕಡೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಮೃತರನ್ನು ಮಹೇಶ್ (32), ಪ್ರೇಮ್ ಕುಮಾರ್ (25) ಮತ್ತು ಅನ್ನದಾನಯ್ಯ (25) ಎಂದು ಗುರುತಿಸಲಾಗಿದೆ. ನಿತ್ಯಾನಂದ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.