ಕಲಬುರಗಿ | ನೇಣು ಬಿಗಿದು ರೈತ ಆತ್ಮಹತ್ಯೆ
Update: 2025-03-22 13:36 IST

ಚಂದ್ರಕಾಂತ್ ಬೇಲೂರ್
ಕಲಬುರಗಿ : ಸಾಲಬಾಧೆಯಿಂದ ನೊಂದು ನೇಣು ಬಿಗಿದುಕೊಂಡು ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಘತ್ತರಗಾ ಗ್ರಾಮದಲ್ಲಿ ನಡೆದಿದೆ.
ಘತ್ತರಗಾ ಗ್ರಾಮದ ನಿವಾಸಿ ಚಂದ್ರಕಾಂತ್ ಬೇಲೂರ್ (57) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.
ರೈತ ಚಂದ್ರಕಾಂತ್, ಬ್ಯಾಂಕ್ ಮತ್ತು ಖಾಸಗಿಯಾಗಿ 40 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ರೈತ ಆತ್ಮಹತ್ಯೆ ಹಿನ್ನಲೆ ಅಫಜಲಪುರ ತಹಶೀಲ್ದಾರ್ ಕಚೇರಿ ಮುಂಭಾಗ ರೈತನ ಮೃತದೇಹವಿಟ್ಟು ಪ್ರತಿಭಟನೆ ನಡೆಸಲಾಯಿತು. ಅಲ್ಲದೆ, ಕಲಬುರಗಿ - ವಿಜಯಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.