ಕಲಬುರಗಿ : ಬ್ಯಾಂಕ್ ಸಾಲದ ನೋಟಿಸ್‌ಗೆ ಹೆದರಿ ಪೆಟ್ರೋಲ್ ಸುರಿದುಕೊಂಡು ರೈತ ಆತ್ಮಹತ್ಯೆ

Update: 2024-09-27 07:24 GMT

 ಪಾಂಡಪ್ಪ ಕೋರವನ್ (46)

ಕಲಬುರಗಿ : ಬ್ಯಾಂಕ್ ಸಾಲದ ನೋಟಿಸ್‌ಗೆ ಹೆದರಿ ರೈತನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಸುಲೇಪೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪೊತಂಗಲ ಗ್ರಾಮದ ನಿವಾಸಿ ಪಾಂಡಪ್ಪ ಕೋರವನ್ (46) ಮೃತ ರೈತ ಎಂದು ತಿಳಿದು ಬಂದಿದೆ. ರೈತ ಪಾಂಡಪ್ಪ ಬ್ಯಾಂಕ್‌ನಿಂದ 1 ಲಕ್ಷ ರೂ. ಸಾಲ ಪಡೆದಿದ್ದ. ಈ ಸಾಲ ತೀರಿಸುವಂತೆ ಬ್ಯಾಂಕ್ ಅಧಿಕಾರಿಗಳು ವಕೀಲರ ಮೂಲಕ ಎರಡು ಬಾರಿ ನೋಟಿಸ್ ನೀಡಿದ್ದರು ಎನ್ನಲಾಗಿದೆ. ಇದರಿಂದ ಹೆದರಿದ ರೈತ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಸುಲೇಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News