ಕಲಬುರಗಿ: ಹಾವು ಕಚ್ಚಿ ವ್ಯಕ್ತಿ ಮೃತ್ಯು

Update: 2024-10-25 04:04 GMT

ಕಲಬುರಗಿ: ಹಾವು ಕಚ್ಚಿ ಕುರಿಗಾಹಿಯೊಬ್ಬರು ಮೃತಪಟ್ಟಿರುವ ಘಟನೆ ಯಡ್ರಾಮಿ ತಾಲ್ಲೂಕಿನ ಯತ್ನಾಳ ಗ್ರಾಮದಲ್ಲಿ ಗುರುವಾರ ನಡೆದಿದೆ.

ತಮ್ಮಣ್ಣ ಭೀಮಪ್ಪ ಬಡಗೇರ (45)  ಮೃತ ವ್ಯಕ್ತಿ. ತಮ್ಮಣ್ಣ ಅವರು ಕುರಿಗಳನ್ನು ಮೇಯಿಸಲು ಯತ್ನಾಳ ಗ್ರಾಮದ ಪಕ್ಕದ ಹಳ್ಳಕ್ಕೆ ಹೋದಾಗ ಹಾವು ಕಚ್ಚಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಜಮೀನಿಗೆ ತೆರಳಿದ್ದ ಜನರು ಮಲಗಿರುವ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ತಿಳಿದು ಕುಟುಂಬಸ್ಥರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ತಮ್ಮಣ್ಣ ಅವರಿಗೆ ಮೂವರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ.  ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News