ಕಲಬುರಗಿ: ನದಿಯಲ್ಲಿ ಮುಳುಗಿ ಸಹೋದರರಿಬ್ಬರು ಮೃತ್ಯು

Update: 2024-09-27 03:51 GMT

ಕಲಬುರಗಿ:  ಸ್ನಾನಕ್ಕೆಂದು ಭೀಮಾ ನದಿಗಿಳಿದ ಇಬ್ಬರು ಸಹೋದರರು ಮುಳುಗಿ ಮೃತಪಟ್ಟಿರುವ ಘಟನೆ ದೇವಲಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದೆ.

ಮಹಾರಾಷ್ಟ್ರದ ಉದಯಗಿರಿ ನಿವಾಸಿಗಳಾದ ಬಾಲಾಜಿ (49) ಮತ್ತು ಮಹೇಶ (47) ಮೃತ ಸಹೋದರರು ಎಂದು ಗುರುತಿಸಲಾಗಿದೆ.  ಇವರು ದತ್ತಾತ್ರೇಯ ದೇವಸ್ಥಾನಕ್ಕೆ ದರ್ಶನಕ್ಕೆಂದು ಆಗಮಿಸಿದ್ದರು.  

ದೇವಸ್ಥಾನದ ದರ್ಶನಕ್ಕೆಂದು ಆಗಮಿಸಿದ ಐವರು ಪಾಪಾನಾಶಿ ಭೀಮಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮೋಹನ‌ ಎಂಬವರು ನದಿಯಲ್ಲಿ ಮುಳುಗುತ್ತಿರುವುದನ್ನು ಗಮನಿಸಿ ರಕ್ಷಿಸಲು ಮುಂದಾಗಿರುವ ವೇಳೆ ಇಬ್ಬರು

ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೂಡಲೇ ಸ್ಥಳೀಯರು ಮೋಹನ್ ನನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News