ನಾಗಮಂಗಲ ಗಲಾಟೆ | ಘಟನೆಯ ಕುರಿತು ಎಲ್ಲ ಆಯಾಮಗಳಿಂದ ತನಿಖೆ : ಗೃಹ ಸಚಿವ ಜಿ.ಪರಮೇಶ್ವರ್‌

Update: 2024-09-17 07:35 GMT

ಕಲಬುರಗಿ : ನಾಗಮಂಗಲದ ಅಹಿತರ ಘಟನೆಯ ಕುರಿತು ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಮಂಗಳವಾರ ಕಲಬುರಗಿಯಲ್ಲಿ ಮಾತನಾಡಿದ ಅವರು, "ಈಗಾಗಲೇ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಹಿತಕರ ಘಟನೆಯಲ್ಲಿ ಯಾರ್ಯಾರು ಭಾಗಿ ಎಂಬುದು ತನಿಖೆಯಿಂದ ಬಯಲಿಗೆ ಬರಲಿದೆ" ಎಂದರು.

ಶಾಸಕ ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧಿಸಿಲ್ಲ. ದೂರು ದಾಖಲಾದ ನಂತರ ಬಂಧನವಾಗಿದೆ. ಆದರೆ ಯಾದಗಿರಿ ಶಾಸಕರ ವಿರುದ್ದ ದೂರಿಗೂ ಇದಕ್ಕೂ ವ್ಯತ್ಯಾಸ ವಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News