ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2023-07-16 15:35 GMT

ಕಾರ್ಕಳ, ಜು.16: ಮದ್ಯಪಾನ ಮಾಡುವ ಚಟ ಹೊಂದಿದ್ದ ಸಾಣೂರು ಹಾರ್ದೋಟ್ಟು ನಿವಾಸಿ ರವಿ ಶೆಟ್ಟಿ(55) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜು.15ರಂದು ಸಂಜೆ ವೇಳೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ: ಅನಾರೋಗ್ಯದಿಂದ ಬಳಲುತ್ತಿದ್ದ ಅಲೆವೂರು ನೆಹರೂ ನಗರದ ನಾರಾಯಣ ಸೇರಿಗಾರ್(72) ಎಂಬವರು ಮಾನಸಿಕವಾಗಿ ನೊಂದು ಜೀವನ ದಲ್ಲಿ ಜಿಗುಪ್ಸೆಗೊಂಡು ಜು.15ರಂದು ಸಂಜೆ ವೇಳೆ ಮನೆಯ ಚಾವಡಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News