ಬಂಟ್ವಾಳ : ಲಾರಿ - ಸ್ಕೂಟರ್ ನಡುವೆ ಅಪಘಾತ; ಸ್ಕೂಟರ್ ಸವಾರನಿಗೆ ಗಾಯ

Update: 2023-06-27 14:34 GMT

ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತದಲ್ಲಿ, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ಸಂಜೆ ಪುಂಚಮೆ ಎಂಬಲ್ಲಿ ನಡೆದಿದೆ.

ಘಟನೆಯಿಂದ ಸ್ಕೂಟರ್ ಸವಾರ ಕಳಸಗುರಿ ನಿವಾಸಿ ಬಾಲಕೃಷ್ಣ ಶೆಟ್ಟಿ ಕೊಡಿಬೆಟ್ಟು ತೀವ್ರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .

ಪೊಳಲಿ ಪುಂಚಮೆಯಿಂದ ಅಡ್ಡೂರು ದಾರಿ ಮಧ್ಯೆ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲಿನ ಲಾರಿ ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದು ಢಿಕ್ಕಿಯ ರಭಸಕ್ಕೆ ಲಾರಿ ರಸ್ತೆ ಮಧ್ಯೆ ಪಲ್ಟಿಯಾಗಿದೆ.

ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News