ಜನಾರ್ದನ ಪೂಜಾರಿ, ರಮಾನಾಥ ರೈ ಮನೆಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Update: 2023-06-23 18:26 GMT

ಬಂಟ್ವಾಳ : ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಮನೆಗೆ ಶುಕ್ರವಾರ ಭೇಟಿ ನೀಡಿದರು.

ದ.ಕ.ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುವಂತೆ ದಿನೇಶ್ ಗುಂಡೂರಾವ್ ಅವರಿಗೆ ಪೂಜಾರಿಯವರು ಸಲಹೆ ನೀಡಿದರು. ನಿಮ್ಮಂತವರ ಮಾರ್ಗದರ್ಶನ, ಸಲಹೆ ಪಡೆಯುವುದೇ ನಮ್ಮ ಸೌಭಾಗ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬಳಿಕ ದಿನೇಶ್ ಗುಂಡೂರಾವ್ ಅವರು ಮಾಜಿ ಸಚಿವ ಬಿ. ರಮಾನಾಥ ರೈ ಅವರ ಮನೆಗೆ ಭೇಟಿ ನೀಡಿದರು.

ವಿಧಾನ ಪರಿಷತ್ ಸದಸ್ಯ ಕೆ.ಹರೀಶ್‌ಕುಮಾರ್, ಪಿಯೂಸ್ ಎಲ್.ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ ಜೈನ್, ಪದ್ಮರಾಜ್ ಆರ್, ಮಿಥುನ್ ರೈ, ಬೇಬಿ ಕುಂದರ್, ಸುದೀಪ್‌ ಕುಮಾರ್ ಶೆಟ್ಟಿ, ಲುಕ್ಮಾನ್ ಬಂಟ್ವಾಳ, ಸುರೇಶ್ ಜೋರ, ಸುದರ್ಶನ್ ಜೈನ್, ಮಾಯಿಲಪ್ಪ ಸಾಲ್ಯಾನ್, ವೆಂಕಪ್ಪ ಪೂಜಾರಿ, ಬಿ.ಎಂ. ಅಬ್ಬಾಸ್ ಆಲಿ, ಜನಾರ್ದನ ಚಂಡ್ತಿಮಾರ್, ವಾಸು ಪೂಜಾರಿ, ಕರುಣಾಕರ ಶೆಟ್ಟಿ, ನವೀನ್ ಡಿ'ಸೋಜ, ಎ.ಸಿ. ವಿನಯರಾಜ್, ಪ್ರವೀಣ್‌ ಚಂದ್ರ ಶೆಟ್ಟಿ, ಅನಿಲ್‌ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.



Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News