ವಿಪರೀತ ಮಳೆಯಿಂದ ರಸ್ತೆಬದಿಯ ಕೆರೆಗೆ ಸ್ಕೂಟರ್ ಸಮೇತ ಬಿದ್ದು ಸವಾರ ಮೃತ್ಯು

Update: 2023-07-05 15:47 GMT

ದಿನಕರ ಶೆಟ್ಟಿ

ಕೋಟ, ಜು.5: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸ್ಕೂಟರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಸವಾರ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತೆಕ್ಕಟ್ಟೆ ಸಮೀಪದ ಮಲ್ಯಾಡಿ ಎಂಬಲ್ಲಿ ಮಂಗಳವಾರ ಮಧ್ಯರಾತ್ರಿ ವೇಳೆ ನಡೆದಿದೆ

ಮೃತರನ್ನು ಸ್ಥಳಿಯ ನಿವಾಸಿ ದಿನಕರ ಶೆಟ್ಟಿ (53) ಎಂದು ಗುರುತಿಸಲಾಗಿದೆ.

ಮಣೂರಿನಲ್ಲಿರುವ ಹಳ್ಳಿಮನೆ ದೊಣ್ಣೆ ಬಿರಿಯಾನಿ ಹೋಟಲಿನಲ್ಲಿ ಕ್ಯಾಶ್ಯರ್ ಆಗಿ ಕೆಲಸ ಮಾಡಿಕೊಂಡಿದ್ದ ಇವರು ತನ್ನ ಸ್ಕೂಟರಿನಲ್ಲಿ ರಾತ್ರಿ ಮನೆಗೆ ಹೊರಟಿದ್ದರು. ವಿಪರೀತ ಮಳೆಯಿಂದಾಗಿ ಇವರ ಮನೆ ಸಮೀಪದ ತಿರುವಿ ನಲ್ಲಿರುವ ಕೆರೆಯು ತುಂಬಿ ಮಣ್ಣು ರಸ್ತೆಯಲ್ಲಿ ನೀರು ಹರಿಯುತ್ತಿತ್ತೆನ್ನ ಲಾಗಿದೆ. ಈ ರಸ್ತೆಯಲ್ಲಿ ಬರುತ್ತಿದ್ದ ದಿನಕರ ಶೆಟ್ಟಿ ಮಳೆಯಿಂದ ಯಾವುದೇ ತಡೆಗೋಡೆ ಇಲ್ಲದ ಸುಮಾರು 15- 20 ಅಡಿ ಆಳದ ಕೆರೆಗೆ ಸ್ಕೂಟರ್ ಸಮೇತ ಬಿದ್ದರೆನ್ನಲಾಗಿದೆ.

ಕೆಲಸ ಮುಗಿಸಿ ಹೊರಟಿರುವ ಬಗ್ಗೆ ಪತ್ನಿಗೆ ಕರೆ ಮಾಡಿದ ದಿನಕರ ಶೆಟ್ಟಿ ಮನೆ ಬಾರದಿರುವುದನ್ನು ನೋಡಿ ಹುಡುಕಾಡಿದಾಗ ಸ್ಕೂಟರ್ ಸಹಿತ ಬಿದ್ದಿರು ವುದು ತಿಳಿದುಬಂತು. ಕೂಡಲೇ ಸ್ಥಳೀಯರು ಪೊಲೀಸರಿಗೆ ಅಗ್ನಿಶಾಮಕ ದಳ ಹಾಗೂ ಮುಳುಗುತಜ್ಞ ಈಶ್ವರ ಮಲ್ಪೆಅವರಿಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಆಗಮಿಸಿದ ಈಶ್ವರ ಮಲ್ಪೆಕೆರೆಗೆ ಧುಮುಕಿ ಮೊದಲು ಸ್ಕೂಟರ್ ಅನ್ನು ಮೇಲಕ್ಕೆ ಎತ್ತಿದರು. ನಂತರ ಹುಡುಕಾಟ ನಡೆಸಿ ಇಂದು ನಸುಕಿನ ವೇಳೆ 1:30ರ ಸುಮಾರಿಗೆ ಮೃತದೇಹವನ್ನು ಮೇಲಕ್ಕೆ ತಂದರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News